ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
Cross references
ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.
ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.