ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
Cross references
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.