ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
Cross references
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.