Home Bibles ಯೆರೆಮಿಯ 21:6 · ಕನ್ನಡ ಬೈಬಲ್
ಯೆರೆಮಿಯ 21:6 · ಕನ್ನಡ ಬೈಬಲ್

ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.

Cross references

ಆದಿಕಾಂಡ 6:7

ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.

ಯೆಶಾಯ 6:11

ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ

ಯೆಶಾಯ 24:1

ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.

ಯೆರೆಮಿಯ 7:20

ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.

ಯೆರೆಮಿಯ 12:3

ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ

ಯೆರೆಮಿಯ 14:12

ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?

ಯೆರೆಮಿಯ 16:4

ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.

ಯೆರೆಮಿಯ 20:4

ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.

ಯೆರೆಮಿಯ 32:24

ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.

ಯೆರೆಮಿಯ 33:12

ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--

ಯೆರೆಮಿಯ 34:17

ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

ಯೆಹೆಜ್ಕೇಲ 5:12

ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.

ಯೆಹೆಜ್ಕೇಲ 7:15

ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.

ಯೆಹೆಜ್ಕೇಲ 12:16

ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.

ಯೆಹೆಜ್ಕೇಲ 14:13

ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,

ಯೆಹೆಜ್ಕೇಲ 14:17

ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ

ಯೆಹೆಜ್ಕೇಲ 14:19

ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

ಯೆಹೆಜ್ಕೇಲ 14:21

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

ಯೆಹೆಜ್ಕೇಲ 33:27

ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.

ಯೆಹೆಜ್ಕೇಲ 33:29

ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.

ಹೊಶೇಯ 4:3

ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.

ಮೀಕ 3:12

ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಸೆಫನ್ಯ 1:3

ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.

ಲೂಕ 21:24

ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

Interlinear

Choose Theme