ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
Cross references
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.