ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
Cross references
ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.
ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.