Home Bibles ಯೆರೆಮಿಯ 22:15 · ಕನ್ನಡ ಬೈಬಲ್
ಯೆರೆಮಿಯ 22:15 · ಕನ್ನಡ ಬೈಬಲ್

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

Cross references

ದ್ವಿತೀಯೋಪದೇಶಕಾಂಡ 4:40

ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.

2 ಸಮುವೇಲ 8:15

ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.

1 ಅರಸುಗಳು 4:20

ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.

1 ಅರಸುಗಳು 10:9

ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.

2 ಅರಸುಗಳು 22:2

ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.

2 ಅರಸುಗಳು 23:25

ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.

1 ದಿನವೃತ್ತಾಂತ 3:15

ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.

2 ದಿನವೃತ್ತಾಂತ 34:2

ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.

2 ದಿನವೃತ್ತಾಂತ 35:7

ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ

2 ದಿನವೃತ್ತಾಂತ 35:12

ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.

2 ದಿನವೃತ್ತಾಂತ 35:22

ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.

2 ದಿನವೃತ್ತಾಂತ 35:26

ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

ಕೀರ್ತನೆಗಳು 128:1

ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.

ಸಾಮೇತಿಗಳು 20:28

ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

ಸಾಮೇತಿಗಳು 21:3

ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.

ಸಾಮೇತಿಗಳು 25:5

ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.

ಸಾಮೇತಿಗಳು 29:4

ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.

ಸಾಮೇತಿಗಳು 31:9

ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.

ಸಭಾಪ್ರಸಂಗಿ 2:24

ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.

ಸಭಾಪ್ರಸಂಗಿ 9:7

ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

ಸಭಾಪ್ರಸಂಗಿ 10:17

ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.

ಯೆಶಾಯ 3:10

ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 33:16

ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.

ಯೆರೆಮಿಯ 21:12

ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;

ಯೆರೆಮಿಯ 22:3

ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.

ಯೆರೆಮಿಯ 22:18

ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?

ಯೆರೆಮಿಯ 23:5

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ಯೆರೆಮಿಯ 42:6

ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.

ಲೂಕ 11:41

ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.

ಅಪೋಸ್ತಲರ ಕೃತ್ಯಗಳು 2:46

ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.

1 ಕೊರಿಂಥದವರಿಗೆ 10:31

ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.

Interlinear

Choose Theme