ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
Cross references
ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.
ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.