Home Bibles ಯೆರೆಮಿಯ 22:3 · ಕನ್ನಡ ಬೈಬಲ್
ಯೆರೆಮಿಯ 22:3 · ಕನ್ನಡ ಬೈಬಲ್

ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.

Cross references

ನಿರ್ಗಮಕಾಂಡ 22:22

ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.

ನಿರ್ಗಮಕಾಂಡ 23:6

ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

ಲೇವ್ಯಕಾಂಡ 19:15

ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.

ದ್ವಿತೀಯೋಪದೇಶಕಾಂಡ 10:18

ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ದ್ವಿತೀಯೋಪದೇಶಕಾಂಡ 19:10

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.

ದ್ವಿತೀಯೋಪದೇಶಕಾಂಡ 24:7

ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 24:17

ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.

ದ್ವಿತೀಯೋಪದೇಶಕಾಂಡ 25:1

ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.

ದ್ವಿತೀಯೋಪದೇಶಕಾಂಡ 27:19

ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

2 ಸಮುವೇಲ 23:3

ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.

2 ಅರಸುಗಳು 24:4

ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.

ಯೋಬ 22:9

ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.

ಯೋಬ 24:9

ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.

ಯೋಬ 29:7

ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.

ಕೀರ್ತನೆಗಳು 68:5

ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.

ಕೀರ್ತನೆಗಳು 72:2

ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.

ಕೀರ್ತನೆಗಳು 82:4

ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.

ಕೀರ್ತನೆಗಳು 94:6

ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.

ಕೀರ್ತನೆಗಳು 94:21

ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.

ಸಾಮೇತಿಗಳು 6:17

ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,

ಸಾಮೇತಿಗಳು 23:10

ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;

ಯೆಶಾಯ 1:15

ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.

ಯೆಶಾಯ 1:23

ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.

ಯೆರೆಮಿಯ 5:28

ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.

ಯೆರೆಮಿಯ 7:5

ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.

ಯೆರೆಮಿಯ 7:6

ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

ಯೆರೆಮಿಯ 9:24

ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.

ಯೆರೆಮಿಯ 21:12

ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;

ಯೆರೆಮಿಯ 22:17

ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

ಯೆರೆಮಿಯ 26:16

ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

ವಿಲಾಪಗಳು 3:36

ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.

ಯೆಹೆಜ್ಕೇಲ 18:7

ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,

ಯೆಹೆಜ್ಕೇಲ 22:7

ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.

ಯೋವೇಲ 3:19

ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.

ಆಮೋಸ 5:15

ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.

ಮೀಕ 3:11

ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಮೀಕ 6:8

ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.

ಜೆಕರ್ಯ 7:9

ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;

ಮಲಾಕಿ 3:5

ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Interlinear

Choose Theme