ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
Cross references
ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.