ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
Cross references
ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.