Home Bibles ಯೆರೆಮಿಯ 22:5 · ಕನ್ನಡ ಬೈಬಲ್
ಯೆರೆಮಿಯ 22:5 · ಕನ್ನಡ ಬೈಬಲ್

ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

Cross references

ಆದಿಕಾಂಡ 22:16

ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ

ಅಂಕೆಗಳ ಪುಸ್ತಕ 14:28

ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.

ದ್ವಿತೀಯೋಪದೇಶಕಾಂಡ 32:40

ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.

2 ದಿನವೃತ್ತಾಂತ 7:19

ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ

2 ದಿನವೃತ್ತಾಂತ 7:21

ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.

2 ದಿನವೃತ್ತಾಂತ 7:22

ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.

ಕೀರ್ತನೆಗಳು 95:11

ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.

ಯೆಶಾಯ 1:20

ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.

ಯೆರೆಮಿಯ 7:13

ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

ಯೆರೆಮಿಯ 12:7

ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.

ಯೆರೆಮಿಯ 26:6

ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.

ಯೆರೆಮಿಯ 39:8

ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.

ಆಮೋಸ 6:8

ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.

ಆಮೋಸ 8:7

ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.

ಮೀಕ 3:12

ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಹೆಬ್ರಿಯರಿಗೆ 3:18

ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.

ಹೆಬ್ರಿಯರಿಗೆ 6:13

ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--

ಹೆಬ್ರಿಯರಿಗೆ 6:17

ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

Interlinear

Choose Theme