Home Bibles ಯೆರೆಮಿಯ 22:9 · ಕನ್ನಡ ಬೈಬಲ್
ಯೆರೆಮಿಯ 22:9 · ಕನ್ನಡ ಬೈಬಲ್

ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

Cross references

ದ್ವಿತೀಯೋಪದೇಶಕಾಂಡ 29:24

ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.

ದ್ವಿತೀಯೋಪದೇಶಕಾಂಡ 29:25

ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,

2 ಅರಸುಗಳು 22:17

ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.

2 ದಿನವೃತ್ತಾಂತ 34:25

ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.

ಯೆರೆಮಿಯ 2:17

ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?

ಯೆರೆಮಿಯ 11:10

ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.

ಯೆರೆಮಿಯ 16:11

ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.

ಯೆರೆಮಿಯ 40:2

ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.

ಯೆರೆಮಿಯ 50:7

ಬಾಬೆಲ್‌ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.

Interlinear

Choose Theme