ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
Cross references
ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.