ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
Cross references
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.