ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
Cross references
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.