ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
Cross references
ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ.
ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.