ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
Cross references
ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.