ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
Cross references
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ,
ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.