ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
Cross references
ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.