ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
Cross references
ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.
ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.