Home Bibles ಯೆರೆಮಿಯ 26:13 · ಕನ್ನಡ ಬೈಬಲ್
ಯೆರೆಮಿಯ 26:13 · ಕನ್ನಡ ಬೈಬಲ್

ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?

Cross references

ನಿರ್ಗಮಕಾಂಡ 32:14

ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.

ದ್ವಿತೀಯೋಪದೇಶಕಾಂಡ 32:36

ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.

ನ್ಯಾಯಾಧಿಪತಿಗಳು 2:18

ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.

ಯೆಶಾಯ 1:19

ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;

ಯೆಶಾಯ 55:7

ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

ಯೆರೆಮಿಯ 7:3

ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಯೆರೆಮಿಯ 7:7

ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.

ಯೆರೆಮಿಯ 18:8

ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.

ಯೆರೆಮಿಯ 26:3

ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.

ಯೆರೆಮಿಯ 26:19

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ

ಯೆರೆಮಿಯ 35:15

ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.

ಯೆರೆಮಿಯ 36:3

ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.

ಯೆರೆಮಿಯ 42:10

ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.

ಯೆಹೆಜ್ಕೇಲ 33:11

ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಹೊಶೇಯ 14:1

ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;

ಯೋವೇಲ 2:14

ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?

ಯೋನ 3:9

ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.

ಯೋನ 4:2

ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

ಹೆಬ್ರಿಯರಿಗೆ 5:9

ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.

Interlinear

Choose Theme