ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
Cross references
ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.