ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Cross references
ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.