ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
Cross references
ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.