ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
Cross references
ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.