ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
Cross references
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.