ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
Cross references
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.