ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
Cross references
ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.