Home Bibles ಯೆರೆಮಿಯ 3:9 · ಕನ್ನಡ ಬೈಬಲ್
ಯೆರೆಮಿಯ 3:9 · ಕನ್ನಡ ಬೈಬಲ್

ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.

Cross references

ಯೆಶಾಯ 57:3

ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.

ಯೆಶಾಯ 57:6

ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?

ಯೆರೆಮಿಯ 2:7

ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.

ಯೆರೆಮಿಯ 2:27

ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.

ಯೆರೆಮಿಯ 3:2

ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.

ಯೆರೆಮಿಯ 10:8

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ಯೆಹೆಜ್ಕೇಲ 16:17

ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.

ಯೆಹೆಜ್ಕೇಲ 23:10

ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.

ಹೊಶೇಯ 4:12

ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.

ಯೋವೇಲ 1:19

ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.

ಹಬಕ್ಕೂಕ 2:19

ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.

Interlinear

Choose Theme