ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
Cross references
ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.