ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.