ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
Cross references
ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.
ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.