ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
Cross references
ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.