ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
Cross references
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.