ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
Cross references
ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.