ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
Cross references
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.