ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
Cross references
ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.