Home Bibles ಯೆರೆಮಿಯ 32:24 · ಕನ್ನಡ ಬೈಬಲ್
ಯೆರೆಮಿಯ 32:24 · ಕನ್ನಡ ಬೈಬಲ್

ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.

Cross references

ದ್ವಿತೀಯೋಪದೇಶಕಾಂಡ 4:26

ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.

ದ್ವಿತೀಯೋಪದೇಶಕಾಂಡ 31:16

ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

ದ್ವಿತೀಯೋಪದೇಶಕಾಂಡ 32:24

ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.

ಯೆಹೋಶುವ 23:15

ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.

2 ಸಮುವೇಲ 20:15

ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.

ಯೆರೆಮಿಯ 6:6

ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ

ಯೆರೆಮಿಯ 14:12

ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?

ಯೆರೆಮಿಯ 15:1

ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಯೆರೆಮಿಯ 16:4

ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.

ಯೆರೆಮಿಯ 21:4

ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.

ಯೆರೆಮಿಯ 24:10

ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.

ಯೆರೆಮಿಯ 32:3

ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.

ಯೆರೆಮಿಯ 32:25

ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.

ಯೆರೆಮಿಯ 33:4

ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.

ಯೆರೆಮಿಯ 34:17

ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

ಯೆರೆಮಿಯ 37:6

ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.

ವಿಲಾಪಗಳು 2:21

ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.

ವಿಲಾಪಗಳು 4:3

ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.

ಯೆಹೆಜ್ಕೇಲ 4:2

ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.

ಯೆಹೆಜ್ಕೇಲ 14:21

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

ಯೆಹೆಜ್ಕೇಲ 21:22

ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.

ಯೆಹೆಜ್ಕೇಲ 21:27

ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.

ಹಬಕ್ಕೂಕ 1:10

ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.

ಜೆಕರ್ಯ 1:6

ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.

ಮತ್ತಾಯ 24:35

ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

Interlinear

Choose Theme