ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
Cross references
ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.