ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
Cross references
ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.