ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Cross references
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.