ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Cross references
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ