ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Cross references
ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.