ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
Cross references
ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ