ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
Cross references
ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.