ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
Cross references
ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.
ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.