ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Cross references
ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.