ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
Cross references
ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.
ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.