ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
Cross references
ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು